ಉ.ಕ ಸುದ್ದಿಜಾಲ ಬಳ್ಳಾರಿ :
ಗುರುವಾರವಷ್ಟೇ (ಜ.1) ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಟ್ಟೂರ್ ಅವರನ್ನು, ಕರ್ತವ್ಯ ಲೋಪದ ಆರೋಪದ ಮೇಲೆ ಶುಕ್ರವಾರ ಅಮಾನತು ಮಾಡಲಾಗಿದೆ.
ಬುಧವಾರ ರಾತ್ರಿಯಷ್ಟೇ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಬಿದ್ದಿತ್ತು. ನೆಜೂರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದರು. ಅದೇ ದಿನ ಕಾಂಗ್ರೆಸ್, ಬಿಜೆಪಿ ನಾಯಕರ ಬೆಂಬಲಿಗರ ಮಧ್ಯೆ ಘರ್ಷಣೆ ನಡೆದಿತ್ತು. ಈ ಬಗ್ಗೆ ವರದಿ ನೀಡುವಂತೆ ಬಳ್ಳಾರಿ ವಲಯದ ಡಿಐಜಿಪಿ ವರ್ತಿಕಾ ಕಟಿಯಾರ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಸೂಚಿಸಿದ್ದರು.
‘ಪರಿಸ್ಥಿತಿ ನಿಭಾಯಿಸುವಲ್ಲಿ ಹಾಗೂ ಹಿರಿಯ ಅಧಿಕಾರಿಗಳಿಗೆ ಘಟನೆಯ ಗಂಭೀರತೆ ಬಗ್ಗೆ ಮಾಹಿತಿ ನೀಡುವಲ್ಲಿ ಎಸ್ಪಿ ವಿಫಲರಾಗಿದ್ದಾರೆ’ ಎಂದು ವರ್ತಿಕಾ ಕಟಿಯಾರ್ ವರದಿ ನೀಡಿದ್ದರು. ಅದನ್ನು ಆಧರಿಸಿ ಅಮಾನತು ಮಾಡಲಾಗಿದೆ.
ಬಳ್ಳಾರಿ ನೂತನ ಎಸ್ಪಿ ಅಮಾನತ್ತು – ಯಾಕೆ ಗೋತ್ತಾ?


