ಉ.ಕ ಸುದ್ದಿಜಾಲ ಬೆಳಗಾವಿ :

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರ ದುರ್ಮರಣ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸೋಮನಟ್ಟಿ ಗ್ರಾಮದ ಬಳಿ ನಡೆದ ಘಟನೆ. ಬೆಳಗಾವಿ ಮತ್ತು ಬಾಗಲಕೋಟ ರಾಜ್ಯ ಹೆದ್ದಾರಿ ಮಾರ್ಗದಲ್ಲಿ ನಡೆದ ಘಟನೆ.

ಸೋಮನಟ್ಟಿ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ಮರಕ್ಕೆ ಡಿಕ್ಕಿ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂರು ಜನರ ಪೈಕಿ ಇಬ್ಬರು ಸ್ಥಳದಲ್ಲೇ ಸಾವು. ಯರಗಟ್ಟಿ ಕಡೆಯಿಂದ ಬೆಳಗಾವಿ ಕಡೆಗೆ ಬರುವಾಗ ನಡೆದ ಘಟನೆ.

ಸಚಿನ್ ಯಲ್ಲಪ್ಪ ಬೋರಿಮರದ, ಬಾಲಕೃಷ್ಣ ಬಸಪ್ಪ ಸುಲದಾಳ ಸಾವನ್ನಪ್ಪಿದ ಯುವಕರು. ಇನ್ನೊಬ್ಬ ಯುವಕನ್ನ ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು. ಬೆಳಗಾವಿ ತಾಲೂಕಿನ ಕರಿಕಟ್ಟಿ ಗ್ರಾಮದ ಯುವಕರ ಎನ್ನುವ ಮಾಹಿತಿ.

ಸ್ಥಳಕ್ಕೆ ಡಿವೈಎಸ್ಪಿ ಡಾ ವೀರಯ್ಯ ಹಿರೇಮಠ, ಪಿಐ ಗಜಾನನ ನಾಯ್ಕ ,ಪಿಎಸ್ ಐ ಈರಪ್ಪ ರಿತ್ತಿ ಭೇಟಿ ಪರಿಶೀಲನೆ. ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.