ಉ.ಕ ಸುದ್ದಿಜಾಲ ಬೆಳಗಾವಿ :
ಗೌಂಡವಾಡದ ಯುವಕನ ಕೊಲೆ ಪ್ರಕರಣದ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ಬೆಳಗಾವಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ಆದೇಶ. ಗೌಂಡವಾಡ ಗ್ರಾಮದ ಭೈರವನಾಥ ದೇವಸ್ಥಾನ ಜಾಗ ಸಂಬಂಧ ಎರಡು ಗುಂಪುಗಳ ಮಧ್ಯೆ ವ್ಯಾಜ್ಯ.
ಬೆಳಗಾವಿ ಜಿಲ್ಲೆಯ ಗೌಂಡವಾಡ ಗ್ರಾಮದ ಭೈರವನಾಥ ದೇವಸ್ಥಾನ ಜಾಗದ ಪರ ಹೋರಾಟ ನಡೆಸುತ್ತಿದ್ದ ಸತೀಶ್ ಪಾಟೀಲ. ಈ ಸಿಟ್ಟಿಗೆ ಮನೆ ಮುಂದೆ ನಿಂತಿದ್ದ ಸತೀಶ್ ಪಾಟೀಲ ಕೊಲೆಗೈದಿದ್ದ ಆರೋಪಿಗಳು. 18 ಸೆಪ್ಟೆಂಬರ್ 2022 ರಂದು ರಾತ್ರಿ ಗೌಂಡವಾಡ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣ.
ಪ್ರಕರಣ ಸಂಬಂಧ ಐವರು ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ, ತಲಾ ಎರಡು ಲಕ್ಷ ದಂಡ. ಪ್ರಕರಣದ ನಾಲ್ವರು ಆರೋಪಿಗಳಿಗೆ ಸಾಮಾನ್ಯ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ. ಮೂರು ವರ್ಷಗಳ ಕಾಲ ವಾದ ಪ್ರತಿವಾದ ಆಲಿಸಿ ಅಂತಿಮ ತೀರ್ಪು ಪ್ರಕಟಿಸಿದ ಕೋರ್ಟ್.
ಗೌಂಡವಾಡ ಗ್ರಾಮದ ಆನಂದ ರಾಮಾ ಕುಟ್ರೆ, ಅನರ್ವ್ ಕುಟ್ರೆ, ಜಾಯಪ್ಪ ನೀಲಜಕರ. ಮಹಾಂತೇಶ ನೀಲಜಕರ ಹಾಗೂ ಶಶಿಕಲಾ ಕುಟ್ರೆಗೆ ಕಠಿಣ ಜೀವಾವಧಿ ಶಿಕ್ಷೆ ಪ್ರಕಟ. ಬೆಳಗಾವಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗಂಗಾಧರ ಕೆ.ಎನ್ ಆದೇಶ.
ಬೆಳಗಾವಿ ಗೌಂಡವಾಡ ಯುವಕನ ಕೊಲೆ ಪ್ರಕರಣದ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
