ಉ.ಕ ಸುದ್ದಿಜಾಲ ಬೆಳಗಾವಿ :

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಕಾರು ಅಪಘಾತ, ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಪಾಯದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಘಟನೆ.

ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಚಿವೆ ಲಕ್ಷ್ಮೀ ಕಾರು. ಲಕ್ಷ್ಮೀ ಹೆಬ್ಬಾಳಕರ್ ಬೆನ್ನು,ಮುಖಕ್ಕೆ ಸಣ್ಣಪುಟ್ಟ ಗಾಯ, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಇಂದು ಬೆಳಗಿನ ಜಾವ 06 ಗಂಟೆಗೆ ನಡೆದಿರುವ ಘಟನೆ ಸಿಎಲ್ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರಿನಿಂದ ರಸ್ತೆ ಮೂಲಕ ಬರ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಹನ