ಉ.ಕ ಸುದ್ದಿಜಾಲ ಬೆಳಗಾವಿ :

ಕಳೆದ ಆರು ತಿಂಗಳಿಂದ ಪಡಿತರ ಪಡೆಯದ 19,969 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅಲ್ಲದೇ, ಸುಳ್ಳು ದಾಖಲೆ ನೀಡಿ ಆದ್ಯತಾ ಪಡಿತರ ಚೀಟಿ ಪಡೆದವರಿಂದ ₹1.89 ಕೋಟಿ ದಂಡ ಕೂಡ ವಸೂಲಿ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ 557 ಅಂತ್ಯೋಂದಯ, 19,412 ಆದ್ಯತಾ ಪಡಿತರ ಚೀಟಿ ಸೇರಿ ಒಟ್ಟು 19,969 ಪಡಿತರ ಚೀಟಿದಾರರು ಕಳೆದ 6 ತಿಂಗಳು (ನವೆಂಬರ್-2023ರಿಂದ ಏಪ್ರಿಲ್-2024) ರವರೆಗೆ ಪಡಿತರ ಧಾನ್ಯ ಪಡೆದಿಲ್ಲ. ಹೀಗಾಗಿ, ಈ ಎಲ್ಲ ಪಡಿತರ ಚೀಟಿಗಳನ್ನು 2024ರ ಜುಲೈ 29ರಂದು ರದ್ದುಪಡಿಸಲಾಗಿದೆ.

ಅಲ್ಲದೇ, ವಿವಿಧ ಇಲಾಖೆಗಳಲ್ಲಿ ಸರ್ಕಾರಿ ನೌಕರರು ಹಾಗೂ ಅನರ್ಹರು ಹೊಂದಿರುವ ಒಟ್ಟು 45,804 ಆದ್ಯತಾ ಪಡಿತರ ಚೀಟಿಗಳನ್ನು ‘ಆದ್ಯತೇತರ ಎಂದು ಪರಿವರ್ತಿಸಲಾಗಿದೆ. ಇಷ್ಟು ದಿನ ಆದ್ಯತಾ ಪಡಿತರ ಚೀಟಿಯ ಲಾಭ ಪಡೆದ ಕಾರಣ ಆ ಎಲ್ಲ ಪಡಿತರ ಚೀಟಿದಾರರಿಂದ ಒಟ್ಟು ₹1,88,75,946 ಹಣವನ್ನು ದಂಡ ವಸೂಲಿ ಮಾಡಲಾಗಿದೆ.

ಮರಣೋತ್ತರ : 11,117 ಅಂತ್ಯ ಮತ್ತು ಆದ್ಯತಾ ಪಡಿತರ ಚೀಟಿದಾರರು, 1,421 ಆದ್ಯತೇತರ ಪಡಿತರ ಚೀಟಿದಾರರು ಕಾಣಿಸಿಕೊಂಡಿದ್ದಾರೆ. ಒಟ್ಟು 1,538 ಫಲಾನುಭವಿಗಳನ್ನು ತೆಗೆದು ಹಾಕಿದ್ದು, ಅವರ ವಿವರಗಳನ್ನು ದತ್ತಾಂಶದಿಂದ ಹಾಕಲಾಗಿದೆ.

ಸರ್ಕಾರಿ ನೌಕರರು ಹಾಗೂ ಅನರ್ಹರು ಆದ್ಯತಾ ಪಡಿತರ ಚೀಟಿ ಹೊಂದಿದ್ದಲ್ಲಿ ದಾಖಲಾತಿಗಳೊಂದಿಗೆ ಆಯಾ ತಹಶೀಲ್ದಾರ ಕಚೇರಿಗೆ ಅವುಗಳನ್ನು ಒಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.