ಉ‌.ಕ ಸುದ್ದಿಜಾಲ ಬೆಳಗಾವಿ :

ನಿವೃತ್ತಿಯಾಗಿ 10 ವರ್ಷದ ಬಳಿಕ ಜೈಲು ಪಾಲಾದ ಗ್ರಾಮ ಲೆಕ್ಕಾಧಿಕಾರಿ. 30 ವರ್ಷಗಳ ಹಳೇಯ ಪ್ರಕರಣದಲ್ಲಿ ಜೈಲು ಪಾಲು. 500 ರೂಪಾಯಿ ಲಂಚ ಪ್ರಕರಣಕ್ಕೆ ಮತ್ತೆ ಮರುಜೀವ.

ನಾಗೇಶ ಶಿವಂಗೇಕರ್ ಜೈಲು ಪಾಲದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ. ಪಹಣಿ ಪತ್ರದಲ್ಲಿ ವಾಟ್ನಿ ಮಾಡಿ ಉತಾರ ಕೊಡಲು ಲಂಚಕ್ಕೆ ಬೇಡಿಕೆ. ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಲಕ್ಷ್ಮಣ ಕಟಾಂಬಳೆ ಎಂಬುವರಿಂದ ಲೋಕಾಯುಕ್ತಕ್ಕೆ ದೂರು.

500ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ದಾಳಿ. ಆರೋಪಿಯನ್ನು ಟ್ರ್ಯಾಪ್ ಮಾಡಿದ್ದ ಲೋಕಾಯುಕ್ತ ಪೊಲೀಸರು. 2006ರಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು, 1 ಸಾವಿರ ದಂಡ. ಬಳಿಕ ಧಾರವಾಡ ಹೈಕೋರ್ಟ್ ‌ಮೋರೆ ಹೋಗಿದ್ದ ಗ್ರಾಮ ಲೆಕ್ಕಾಧಿಕಾರಿ ನಾಗೇಶ.

ಹೈಕೋರ್ಟ್ ನಲ್ಲಿ ನಾಗೇಶ ಶಿವಂಗೇಕರ್ ಗೆ ರಿಲಿಫ್. ಹೈಕೋರ್ಟ್ ‌ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೇಲ್ನನವಿ ಸಲ್ಲಿಸಿದ್ದ ಲೋಕಾಯುಕ್ತ. ಸುಪ್ರೀಂ ಕೋರ್ಟ್ ಲೋಕಾಯುಕ್ತ ಪರ ತೀರ್ಪು ಪ್ರಕಟ. ಕೆಲಸದಿಂದ ನಿವೃತ್ತಯಾಗಿ 10 ವರ್ಷದ ಬಳಿಕ ಆರೋಪಿ ಜೈಲು ಪಾಲು.

ಬೆಳಗಾವಿ ಹಿಂಡಲಗಾ ಜೈಲಿಗೆ ನಾಗೇಶ ಶಿವಂಗೇಕರ್ ರವಾನೆ. ದೂರುದಾರ ಮೃತಪಟ್ಟು ಐದು ವರ್ಷದ ಬಳಿಕ ಆರೋಪಿಗೆ ಶಿಕ್ಷೆ.