ಉ.ಕ ಸುದ್ದಿಜಾಲ ಬೆಳಗಾವಿ :
ಯತ್ನಾಳಗೆ ಬಿಜೆಪಿ ಕೇಂದ್ರ ಸಮಿತಿಯಿಂದ ಶೋಕಾಸ್ ನೋಟಿಸ್ ವಿಚಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಗುಡುಗಿದ ರಮೇಶ್ ಜಾರಕಿಹೊಳಿ ಶೋಕಾಸ್ ನೋಟಿಸ್ ಬೆನ್ನಲ್ಲೇ ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಯತ್ನಾಳಗೆ ಶೋಕಾಸ್ ನೋಟಿಸ್ ಇಂದು ಬಂದಿದಲ್ಲ, ಎರಡು ದಿನಗಳ ಹಿಂದೆಯೇ ಬಂದಿದೆ ಮಾಧ್ಯಮಗಳ ಇಂದು ಶೋಕಾಸ್ ನೋಟಿಸ್ ವಿಚಾರ ಇಂದು ತೋರಿಸ್ತಿದ್ದಾರೆ ವಿಜಯೇಂದ್ರಗೆ ರಾಜ್ಯಾದ್ಯಕ್ಷ ಸ್ಥಾನ ನಿಭಾಯಿಸಲು ಆಗುವುದಿಲ್ಲ ತಕ್ಷಣವೇ ಅವರನ್ನು ಬದಲಾವಣೆ ಮಾಡಬೇಕೆಂದ ರಮೇಶ್ ಜಾರಕಿಹೊಳಿ
ಬಿ.ಎಸ್. ಯಡಿಯೂರಪ್ಪ ಹುಟ್ಟು ಹೋರಾಟಗಾರ. ಆದರೆ ವಿಜಯೇಂದ್ರ ಬಿಎಸ್ವೈ ಅವರ ಕಾಲಿನ ಧೂಳಿವೂ ಸಮನಲ್ಲ ಜೀನ್ಸ್ ಪ್ಯಾಂಟ್- ಟೀಶರ್ಟ್ ಹಾಕಿ ಅಡ್ಡಾಡುವ ವಯಸ್ಸು ಅವರದ್ದು ಇನ್ನೂ ನಾಲ್ಕು ವರ್ಷಗಳ ಬಳಿಕ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು.
ನಾವು ಯತ್ನಾಳ ಬೆನ್ನಿಗೆ ನಿಲ್ತಿವಿ, ಕೇಂದ್ರ ನಾಯಕರ ಮನವೊಲಿಸುತ್ತೇವೆ. ನನ್ನ ಬೆನ್ನಿಗೆ ನಿಲ್ಲುವಂತೆ ವಿಜಯೇಂದ್ರ ಹಿಂದುಳಿದ ನಾಯಕರಿಗೆ ಬೆದರಿಸುತ್ತಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ ಸಮುದಾಯದವರು. ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ
ಪಾಪ ರೇಣುಕಾಚಾರ್ಯ ರಾಜಕೀಯ ಅಸ್ತಿತ್ವಕ್ಕಾಗಿ ಅವರ ಜೊತೆಗಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳಲ್ಲ ಇನ್ ಡೋರ್ ಸಭೆ ಮಾಡಿ ಕೇಳಲಿ ನಾನು ಹೇಳ್ತಿನಿ ಎಂದ ರಮೇಶ್ ಜಾರಕಿಹೊಳಿ.