ಉ.ಕ ಸುದ್ದಿಜಾಲ ಚಿಕ್ಕಮಗಳೂರು :
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಹಸು ಸಜೀವ ದಹನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಸಮೀಪದ ಗಡಿರಂಗಾಪುರ ಗ್ರಾಮದಲ್ಲಿ ನಡೆದಿದೆ.
ಮೂರ್ತಿ ಎಂಬುವರಿಗೆ ಸೇರಿದ ಕೊಟ್ಟಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಎರಡು ದೊಡ್ಡ ಹಸುಗಳು ಓಡಿಹೋಗಿ ಜೀವ ಉಳಿಸಿಕೊಂಡಿವೆ. ಮತ್ತೆರಡು ಹಸುಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ನಾಲ್ಲೈದು ದಿನದಿಂದ ಮನೆಯಲ್ಲಿ ಯಾರೂ ಇರಲಿಲ್ಲ ದುಷ್ಕರ್ಮಿಗಳು ಬೆಂಕಿ ಹಾಕಿರುವ ಶಂಕೆ.