ಉ.ಕ ಸುದ್ದಿಜಾಲ ಚಿಕ್ಕೋಡಿ :
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆ. ಪರೋಕ್ಷವಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಸತೀಶ್ ಜಾರಕಿಹೊಳಿ ಅಸಮಾಧಾನ. ಅಥಣಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಕಡಿಮೆ ಲೀಡ್ ಸಿಕ್ಕಿದ್ದಕ್ಕೆ ಅಸಮಾಧಾನ.
ಸ್ವಪಕ್ಷಿಯದವರ ವಿರುದ್ದ ತಿರುಗಿಬಿದ್ದ ಸಚಿವ ಸತೀಶ್ ಜಾರಕಿಹೊಳಿ. ನಮ್ಮವರೇ ನಮಗೆ ಮೋಸ ಮಾಡಿದ್ರು. ಅಥಣಿಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದವರಿಂದ ಚುನಾವಣೆಯಲ್ಲಿ ಮೋಸ ಆಗಿದೆ.
ಮೊದಲೇ ಅವರು ಮೈಂಡ್ ಸೆಟ್ ಮಾಡಿಕೊಂಡಿದ್ರು. ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಪರವಾಗಿ ಇದ್ರು. ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ ಸಚಿವ ಸತೀಶ್.
ಲೋಕಸಭಾ ಚುನಾವಣೆಯಲ್ಲಿ ಕುಡಚಿ ಎಂಎಲ್ಎ ಅವರ ಸಂಬಂಧಿ ಕಲ್ಲೋಳಿಕರಗೆ ಸಹಾಯ ಮಾಡಿದ್ದಾರೆ. ಕುಡಚಿ ಎಂಎಲ್ಎ ಮಹೇಶ ತಮ್ಮಣ್ಣವರ ಸಂಬಂಧಿ ಶಂಭು ಕಲ್ಲೋಳಿಕರ.
ಶಂಭು ಕಲ್ಲೋಳಿಕರ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ರು. ಮಹೇಂದ್ರ ತಮ್ಮಣ್ಣವರ ವಿರುದ್ಧ ಹೈಕಮಾಂಡ್ ಗಮನಕ್ಕೆ ತರ್ತೆನೆ ಎಂದ ಸಚಿವ ಸತೀಶ ಜಾರಕಿಹೊಳಿ.