ಉ.ಕ ಸುದ್ದಿಜಾಲ ಹುಬ್ಬಳ್ಳಿ :

ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಜೋಶಿ‌ ಹೇಳಿಕೆ ವಿಚಾರ ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ ಅದಕ್ಕೆ ಪ್ರಹ್ಲಾದ ಜೋಶಿ ಹಾಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ ನೀಡಿದ್ದಾರೆ.

ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಜೋಶಿ‌ ಹೇಳಿಕೆ ವಿಚಾರ : ಗೃಹಮಂತ್ರಿ ಪ್ರತಿಕ್ರಿಯೆ

ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ. ಸಿಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರ. ಸ್ಪೀಕರ್ ಅವರು ತಮ್ಮ‌ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ‌ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು.

ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದ್ರೆ ತನಿಖೆಯನ್ನ ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ. ಹೆಬ್ಬಾಳಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಓಡಿಗೆ ಹಸ್ತಾಂತರ ಮಾಡಲಾಗಿದೆ.

ಸಿಟಿ ರವಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ವಿಚಾರ ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಆರೋಪ ವಿಚಾರ ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ ಸಿಎಂ‌ ಅಥವಾ ಗೃಹ ಸಚಿವರ ಆದೇಶವನ್ನ ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ.

ಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನ ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡ್ತಾರೆ ಅಂತಾ ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದ ಗೃಹ ಸಚಿವ ಜಿ.ಪರಮೇಶ್ವರ