ಉ.ಕ ಸುದ್ದಿಜಾಲ ಹುಬ್ಬಳ್ಳಿ :
ಕುಡಿತ ಬಿಟ್ಟು ದುಡಿಮೆ ಮಾಡು ಎಂದ ತಂದೆ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳಾದ ಮಗ ಹಾಗೂ ಸೊಸೆಯನ್ನು ಹಳೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಪ್ಪಣ್ಣ ಮೈಸೂರ ಹಾಗೂ ಲಕ್ಷ್ಮೀ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಹಳೇ ಹುಬ್ಬಳ್ಳಿ ಸಂತೋಷ ನಗರದಲ್ಲಿ ತಂದೆ ನಾಗರಾಜ ಮಗ ಅಣ್ಣಪ್ಪನಿಗೆ ಬುದ್ದಿವಾದ ಹೇಳಿದ್ದ. ಈ ಸಂದರ್ಭದಲ್ಲಿ ಕೋಪಗೊಂಡ ಮಗ ಹಾಗೂ ಸೊಸೆ ಅವನ ಮೇಲೆ ಚಂಬಿನಿಂದ ಹಲ್ಲೆ ನಡೆಸಿದ್ದರು.
ಗಂಭೀರವಾಗಿ ಗಾಯಗೊಂಡ ಆತನನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಂದೆ ನಾಗರಾಜ ಮೃತಪಟ್ಟಿದ್ದ.
ಆಗ ಆರೋಪಿಗಳಿಬ್ಬರು ಪರಾರಿಯಾಗಿದ್ದರು. ಸದ್ಯ ಹಳೆ ಹುಬ್ಬಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಎಚ್. ಎಸ್. ಹಳ್ಳೂರ ನೇತೃತ್ವದ ತಂಡ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.