ಉ.ಕ ಸುದ್ದಿಜಾಲ ಬಾಗಲಕೋಟೆ :
ರಾಜಕೀಯ ಅಸ್ಥಿರತೆ ಇದೆ ಯಾವ ಪಕ್ಷವೂ ಕೂಡಿ ಹೋಗೋದು ಕಷ್ಟ, ಚುನಾವಣೆವರೆಗೂ ಏನು ಹೇಳೋಕೆ ಆಗೋದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ, ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡದಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಕೋಡಿ ಶ್ರೀಗಳು ಭವಿಷ್ಯ ನುಡದಿದ್ದಾರೆ. ಯುಗಾದಿ ನಂತರ ಪ್ರಕೃತಿ ವಿಕೋಪ ಆಗುತ್ತದೆ. ಆಗೋದಿಲ್ಲ ಅಂತ ಹೇಳೋದಿಲ್ಲ. ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತದೆ. ಯಾರೆ ಆಗಲಿ ತಪ್ಪು ಇರಲಿ ಸರಿ ಇರಲಿ, ನಾವು ಏನು ಮಾಡುತ್ತೇವೆ ಬಿತ್ತಿದ್ದೆ ಬೆಳೆಯೋದು. ಏನ್ ಬಿತ್ತುತ್ತೇವೆ ಅದೆ ಬೆಳೆಯುತ್ತದೆ. ಮಾಡಬಾರದು ಮಾಡಿದರೆ ಆಗಬಾರದ್ದು ಆಗುತ್ತದೆ ಎಂದು ಭವಿಷ್ಯ ನುಡದಿದ್ದಾರೆ.
ರಾಹುಲ್ ಗಾಂಧಿ ಭಾರತ ಜೊಡೊ ವಿಚಾರವಾಗಿ ಮಾತನಾಡಿದ್ದು, ಒಳ್ಳೆಯದಾಗಲಿ ಎಲ್ಲರಿಗೂ ಎಂದ ಶ್ರೀಗಳು. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ ಚುನಾವಣೆವರೆಗೂ ಪಕ್ಷಾಂತರಗಳು ಇರುತ್ತವೆ ರಾಜಕೀಯ ಪಕ್ಷಗಳು ಒಡೆಯುತ್ತವೆ. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ. ಮುಂದೆ ಎಷ್ಟು ಸುಖವಿದೆ ಅಷ್ಟು ಕಷ್ಟವಿದೆ.
ಒಲೆ ಹತ್ತಿ ಉರಿದರೆ ನಿಂತುಕೊಳ್ಳಬಹುದು. ಧರೆ ಹೊತ್ತಿ ಉರಿದರೆ ನಿಲ್ಲೋಕಾಗೋದಿಲ್ಲ ನಾನು ಹೇಳಿದ ಮರುದಿನವೇ ಪ್ಲೈಟ್ ಅಪಘಾತವಾಗಿ ಐವತ್ತು ಜನ ಸತ್ರು, ಯುಗಾದಿ ನಂತರ ಎಲ್ಲ ಡಿಟೇಲ್ ಆಗಿ ಹೇಳತಿನಿ ಎಂದು ಕೊಡಿಹಳ್ಳಿ ಶ್ರೀಗಳು.