ಉ.ಕ‌ ಸುದ್ದಿಜಾಲ ಕಾಗವಾಡ :

ಏಳು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ. ಬಸವೇಶ್ವರ ಏತ ನೀರಾವರಿ ವಿಳಂಬ ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆಯಿಂದಾಗಿ ಕಾಮಗಾರಿ ನಿಂತಲ್ಲೆ ನಿಂತು ರೈತರು ಗುಳೆ ಹೋಗುವ ಪರಿಸ್ಥಿತಿ ಎದುರಾಗಿದೆ.

ಜುಲೈ 15 ಕ್ಕೆ ನೀರು ಬಿಡುವ ಸ್ಥಳೀಯ ಶಾಸಕರ ಹೇಳಿಕೆ ಹುಸಿಯಾಗಿದ್ದಕ್ಕೆ ರೈತರು ಕೆಂಡಾಮಂಡಲ ಈಗ ಬಹುದಿನಗಳ ಬೇಡಿಕೆಗೆ ಪಟ್ಟು ಹಿಡಿದ ರೈತರು ಉಪವಾಸ ಸತ್ಯಾಗ್ರಹಕ್ಕೆ ಸಜ್ಜು ಈ ಹಿನ್ನಲೆಯಲ್ಲಿ ರೈತರಿಗಾಗಿ ಸ್ವ ಸರ್ಕಾರದ ವಿರುದ್ಧ ಸಮರಕ್ಕೆ ಸಿದ್ದ ಶಾಸಕ ರಾಜು ಕಾಗೆ.

ನೀರಾವರಿ ಯೋಜನೆ ಕುರಿತು ಸ್ವ ಗೃಹದಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ರಾಜು ಕಾಗೆ ಬಸವೇಶ್ವರ ಏತ ನೀರಾವರಿ ಕುರಿತು ನಾನು ಸಿಎಂ ಜೊತೆ ಸಮಗ್ರ ಚರ್ಚೆ ಮಾಡಿದ್ದು, ಪೂರ್ಣ ಪ್ರಮಾಣದ ಕಾಮಗಾರಿಯಲ್ಲಿ ಸರ್ಕಾರದ ಲೋಪದೋಷಗಳಿಲ್ಲ.

ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ವಿಳಂಬವಾಗಿದೆ ರೈತರ ಒಳಿತಿಗಾಗಿ ರೈತರ ಜೊತೆಗೆ ಸರ್ಕಾರದ ವಿರುದ್ಧವೂ ನಾನು ಹೋರಾಟ ಮಾಡಲು ಸಿದ್ಧನಾಗಿದ್ದೇನೆ.

ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೂ ನಾನು ಸಿಎಂ ಡಿಸಿಎಂ ಅವರ ಗಮನಕ್ಕೂ ತಂದಿದ್ದೇನೆ. ಒಂದೆಡೆ ಪ್ರವಾಹ ಮತ್ತೊಂದೆಡೆ ಬರ ಪರಿಸ್ಥಿತಿ ಇದೆ. ಈ ಕುರಿತು ಸರ್ಕಾರ ಸೂಕ್ತ ಪರಿಹಾರ ಹಾಗೂ ಬಸವೇಶ್ವರ ಎತ ನೀರಾವರಿ ವಿಳಂಬವಾಗದಂತೆ ಮನವರಿಕೆ ಮಾಡಿದ್ದೇನೆ.

ಒಂದು ವೇಳೆ ಅಗಸ್ಟ್ 30ರ ಒಳಗಾಗಿ ನೀರು ಬಿಡದಿದ್ದರೆ ರೈತರು ಹೋರಾಟಕ್ಕೆ ನಿಂತರೆ ನಾನು ರೈತರ ಜೊತೆಗೂಡಿ ಸ್ವ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ದನಾಗಿದ್ದೇನೆ ಎಂದ ಕಾಗವಾಡ ಶಾಸಕ ರಾಜು ಕಾಗೆ.