ಕಲಬುರಗಿ :
ನವೆಂಬರ 4 ರಂದು ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ರೌಡಿ ಅಭಿಷೇಕನನ್ನು ಹಾಡ ಹಗಲೆ ಭಯಾನಕವಾಗಿ ಹತ್ಯೆ ಮಾಡಿದ್ದ ಆರೋಪಿಗಳನ್ನು ಕಲಬುರಗಿ ಪೋಲಿಸರು ಬಂಧಿಸಿದ್ದಾರೆ.
ಹತ್ಯೆ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿ ಕಲಬುರಗಿ ಜನರನ್ನು ಬೆಚ್ಚಿ ಬೀಳಿಸಿತ್ತು. ಹತ್ಯೆ ಆರೋಪಿಗಳಾದ ಮುರ್ತುಜಾ ಮೊಹಮ್ಮದ್ ಅಲಿ (25), ಸಾಗರ ಭೈರಾಮಡಗಿ (22), ಆಕಾಶ ಜಾಧವ (22), ಶುಭಂ ದೊಡ್ಡಮನಿ (23), ಅಶೋಕ ಮೂಲಭಾರತಿ (21) ಹಾಗೂ ಕೌಶಿಕ್ ಹಳೆಮನಿ (21) ಎನ್ನುವವರ ಬಂಧನ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ನಾಲ್ಕು ಲಾಂಗ್, ಮಚ್ಚು, ಎರಡು ಬೈಕ್ ಹಾಗೂ ಒಂದು ಇನ್ನೋವಾ ಕಾರ್ ವಶಕ್ಕೆ ಪಡೆದುಕೊಳ್ಳಲಾಗಿದೆ.
ಕೊಲೆಗೀಡಾದ ಅಭಿಷೇಕ ತನ್ನ ಗ್ಯಾಂಗ್ ನೊಂದಿಗೆ ಒಂದೂವರೆ ವರ್ಷದ ಹಿಂದೆ ಸಾಗರ ಭೈರಾಮಡಗಿ ಎನ್ನುವ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಹಳೆ ವೈಷಮ್ಯದಿಂದ ಸಾಗರ ಹಾಗೂ ಗ್ಯಾಂಗ್ ನಿಂದ ಅಭಿಷೇಕನ ಹತ್ಯೆ ಮಾಡಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು. ಈ ಕುರಿತು ಕಲಬುರಗಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.