ಉತ್ತರ ಕರ್ನಾಟಕ ಸುದ್ದಿಜಾಲ ಮಂಡ್ಯ :
ಬಸ್ ಮತ್ತು ಸೀಫ್ಟ್ ಕಾರು ನಡುವೆ ಮುಖಾಮುಖಿ ಡಿಕ್ಕಿ.. ಸ್ಥಳದಲ್ಲೇ ಮೂವರ ದುರ್ಮರಣ, ಐವರಿಗೆ ಗಾಯ ವರ್ಷದ ಮೊದಲ ಅಮವಾಸ್ಯೆ ದಿನವೇ ಭೀಕರ ರಸ್ತೆ ಅಪಘಾತ ನಡೆದಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕೆಂಪನಕೊಪ್ಪಲು ಗೇಟ್ ಬಳಿ ನಡೆದಿದೆ.
ಬೆಳ್ಳೂರು ಕಡೆಗೆ ತೆರಳುತ್ತಿದ್ದ ಬಸ್ ಮೈಸೂರು ಕಡೆಗೆ ಹೊಗುತ್ತಿದ್ದ ಕಾರು ನಡುವೆ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಕೊಡಗು ಮೂಲದವರಾಗಿರುವ ಮೃತರು. ಕಾರಿನಲ್ಲಿದ್ದ ನಾಲ್ಕು ಮಂದಿಯಲ್ಲಿ ಮೂವರ ಸಾವು. ಕಾರಿನಲ್ಲಿದ್ದ ಓರ್ವ ಯುವತಿಯ ಸ್ಥಿತಿ ಗಂಭೀರ. ಸೋಮವಾರಪೇಟೆ ಮೂಲದ ಸುದೀಪ್ (35), ಶ್ರೀಜಾ (30) ಹಾಗೂ ತಂಗಮ್ಮ (55) ಮೃತ ದುರ್ದೈವಿಗಳು. 15 ವರ್ಷದ ಯುವತಿಯೊಬ್ಬಳು ಸ್ಥಿತಿ ಚಿಂತಾಜನಕ. ಆದಿಚುಂಚನಗಿರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಬಸ್ ಚಾಲಕ ಹಾಗೂ ಬಸ್ನಲ್ಲಿದ್ದ ನಾಲ್ವರಿಗೆ ಗಾಯಗಳು. ನಾಲ್ವರಿಗೂ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ. ಹೆಚ್ಚಿನ ಚಿಕಿತ್ಸೆಗೆ ಬಿಜಿಎಸ್ ಆಸ್ಪತ್ರೆಗೆ ದಾಖಲು. ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ಮೃತಪಟ್ಟವರ ಶವ ರವಾನೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.