ಉ.ಕ ಸುದ್ದಿಜಾಲ ಕಾಗವಾಡ :
ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಅನಿಲ ಪಾಟೀಲ ಅನಾರೋಗ್ಯ ಕಾರಣ ಮದ್ಯಾನ ನಿಧನ ಹೊಂದಿದ್ದಾರೆ.
ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃತಿಕಾ ಚಿಕಿತ್ಸೆಗೆ ಸ್ಪಂದಿಸದೆ ಕೋಣೆಯುಸಿರೆಳೆದಿದ್ದರೆ. ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ ಎರಡು ಹೆಣ್ಣು ಮಕ್ಕಳಿದ್ದು ಇಬ್ಬರಿಗೂ ಮದುವೆಯಾಗಿದೆ. ಇಂದು ಮದ್ಯಾನ ಚಿಕಿತ್ಸೆ ಫಲಿಸದೆ ಸಾವು ಸಂಭವಿಸಿದೆ.
ಮೃತ ಕೃತಿಕಾಗೆ ನಾಲ್ಕು ವರ್ಷದ ಹೆಣ್ಣು ಮಗಳು ಇದ್ದು ಅಪಾರ ಬಂದು ಬಳಗ ಅಗಲಿದ್ದಾರೆ. ಬೆಂಗಳೂರು ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ ಭೇಟಿ ನೀಡಿ ಕಂಬನಿ ಮಿಡಿದಿದ್ದಾರೆ.
ಅಂತ್ಯ ಸಂಸ್ಕಾರ ಶಾಸಕ ರಾಜು ಕಾಗೆ ಸ್ವ ಗ್ರಾಮದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು. ಬೆಳಗಾವಿಯ ಜಿಲ್ಲೆ ಕಾಗವಾಡ ]ತಾಲೂಕಿನ ಉಗಾರ್ ಪಟ್ಟಣಕ್ಕೆ ಮೃತ ದೇಹ ಆಗಮಿಸಲಿದೆ. ರಾಜು ಕಾಗೆ ಅವರ ಆಪ್ತರ ಆಕ್ರಂದನ ಮುಗಿಲು ಮುಟ್ಟಿದೆ.
ಕಾಗವಾಡ ಶಾಸಕ ರಾಜು ಕಾಗೆ ಹಿರಿಯ ಪುತ್ರಿ ನಿಧನ
