ಉ.ಕ ಸುದ್ದಿಜಾಲ ಚಿಕ್ಕೋಡಿ :
2A ಮೀಸಲಾತಿಗಾಗಿ ನಾಳೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ ಆರಂಭ ಮಾಡಲಾಗುವುದು ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೇರವೇರಿಸಿ ಹೋರಾಟ ಆರಂಭ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದು, ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು.
ಸೆ.10 ರಂದು ನಿಪ್ಪಾಣಿಯಲ್ಲಿ ಬಹಿರಂಗ ಸಭೆ ನಡೆಸಲಾಗುವುದು. ಬಳಿಕ ರಾಷ್ಟ್ರೀಯ ಹೆದ್ದಾರಿಗೆ ಪಾದಯಾತ್ರೆ ಮೂಲಕ ತೆರಳಿ ಇಷ್ಟಲಿಂಗ ಪೂಜೆ ಮಾಡಲಾಗುವುದು. ಲಿಂಗಾಯತ ಸಮುದಾಯಕ್ಕೆ 2A ಮೀಸಲಾತಿ ಸಿಗಬೇಕು. ಕೇಂದ್ರ ಸರ್ಕಾರವು ಓಬಿಸಿ ಪಟ್ಟಿಯಲ್ಲಿ ಸೇರ್ಪಡಿಸಿಕೊಳ್ಳುವಂತೆ ಒತ್ತಾಯ ಮಾಡಲಾಗಿದೆ.
ನಾಳೆ ನಡೆಯುವ ವೀರಶೈವ ಲಿಂಗಾಯತ ಸಮುದಾಯವರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದ್ದಾರೆ.